ದೇಶದ್ರೋಹ ಮಾಡುವ ಸಂಘಟನೆ ಶಮನ ಮಾಡುವ ಬಗ್ಗೆ ಹೇಳಿದ್ದೇವೆ. ಹೊನ್ನಾವರದಲ್ಲಿ ಡಿಕೆಶಿ ಸ್ಪಷ್ಟನೆ

Source: SO News | By Laxmi Tanaya | Published on 4th May 2023, 10:14 PM | Coastal News | State News |

ಹೊನ್ನಾವರ : ದೇಶದ್ರೋಹ ಮಾಡುವ ಸಂಘಟನೆಯನ್ನ ಮಾತ್ರ ಶಮನ ಮಾಡುವ ಬಗ್ಗೆ ಹೇಳಿದ್ದೇವೆ. ಮಾಧ್ಯಮದವರು ಬಿಜೆಪಿಯವರು ನಮ್ಮ ಪ್ರಣಾಳಿಕೆ ಸರಿ ನೋಡಿಲ್ಲ ಎಂದು  ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಗುರುವಾರ ಹೊನ್ನಾವರದ ರಾಮತೀರ್ಥ ಬಳಿ ಮಾದ್ಯಮದವರೊಂದಿಗೆ ಅವರು ಮಾತನಾಡುತ್ತಿದ್ದರು. ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಕರಾವಳಿಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಪ್ರಧಾನಿ ಮೋದಿ ಅವರು ಈ ದೇಶದಲ್ಲಿ ಏನು ಬಡವರಿಗೆ ಸಹಾಯ ಮಾಡಿದ್ದೇನೆ ಎಂದು ಹೇಳಿಲ್ಲ. ಹದಿನೈದು ಲಕ್ಷ ಅಕೌಂಟ್ ಗೆ ಹಣ ಹಾಕಿದ ಬಗ್ಗೆ, ಬೆಲೆ ಏರಿಕೆ ಬಗ್ಗೆ ಹೇಳುವುದಿಲ್ಲ. ಬಿಜೆಪಿಗರು ಭಾವನೆ ಮೇಲೆ ಹೋದರೆ ಕಾಂಗ್ರೆಸ್ ಬದುಕಿನ ಮೇಲೆ ಹೋಗುತ್ತಿದೆ  ಎಂದರು.

ಹನುಮಾನ್ ಯಾರ ಆಸ್ತಿ ಅಲ್ಲ, ಹಿಂದುತ್ವ ನಮ್ಮ ಆಸ್ತಿಯಾಗಿದೆ. ನಾನು ಹಿಂದು, ಸಿದ್ದರಾಮಯ್ಯ ಸಹ ಹಿಂದೂ ನಾವು ಎಲ್ಲಾ ಹಿಂದು ಧರ್ಮದ ಆಚರಣೆ ಮಾಡುತ್ತೇವೆ. ಬಂಗಾರಪ್ಪ ಸಿಎಂ ಆದಾಗ ಆರಾಧನ ಸ್ಕೀಮ್ ತಂದು ಹಳ್ಳಿಯಲ್ಲಿರುವ ದೇವಸ್ಥಾನ ಬೆಳೆಸಿದರು. ನಾವು ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ದೇವಸ್ಥಾನ, ಆಂಜನೇಯ ದೇವಸ್ಥಾನಗಳ ಅಭಿವೃದ್ಧಿ ಮಾಡುತ್ತೇವೆ.
ಹಿಂದು ಯುವಕರಿಗೆ ಶಕ್ತಿ ಕೊಡಲು ಗರುಡ ಸ್ಥಾಪನೆ ಮಾಡುವ ಕೆಲಸವನ್ನ ಕಾಂಗ್ರೆಸ್ ಪಕ್ಷ ಮಾಡುತ್ತದೆ ಎಂದರು. ಬಿಜೆಪಿಯವರು ಹನುಮಾನ್ ಚಾಲೀಸ್ ಬಗ್ಗೆ ಹೇಳುತ್ತಾರೆ. ನಾನು ಹನುಮಾನ್ ಚಾಲೀಸ್ ಹೇಳಲಾ ಎಂದು ಹೇಳಿದ ಡಿಕೆಶಿ ನಮ್ಮ ಪ್ರಣಾಳಿಕೆಯನ್ನ ಸರಿಯಾಗಿ ಒಮ್ಮೆ ನೋಡಲಿ. ಜಾತ್ಯಾತೀತ ತತ್ವಕ್ಕೆ ದ್ರೋಹ ಮಾಡುವವರನ್ನ ದೂರ ಇಡುವ ಕಾರ್ಯ ಮಾಡುತ್ತೇವೆ ಎಂದು ಮಾತ್ರ ಹೇಳಿದ್ದೇವೆ ಎಂದು ಅವರು ಹೇಳಿದರು.

Read These Next

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...