ಅಂಗನವಾಡಿ ಸಮಿತಿಯಿಂದ ನೂತನ ಉಪ ನಿರ್ದೇಶಕಿ ಎಂ.ಜಿ.ಪಾಲಿರವರಿಗೆ ಸ್ವಾಗತ 

Source: sonews | By Staff Correspondent | Published on 9th July 2019, 6:39 PM | State News |

ಕೋಲಾರ : ಮಹಿಳಾ ಮತ್ತು ಮಕ್ಕಳ ಇಲಾಖೆಗೆ ಧಕ್ಷ ಮತ್ತು ಇಲಾಖೆಯಲ್ಲಿ ಉತ್ತಮ ಅಧಿಕಾರಿ ಎಂಬ ಸರ್ಕಾರದಿಂದ ಪ್ರಶಸ್ತಿ ಪಡೆದಿರುವ ಎಂ.ಜಿ.ಪಾಲಿರವರು ಕೋಲಾರದ ಜಿಲ್ಲಾ ಉಪ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಪ್ರಜಾಸೇವಾ ಸಮಿತಿ (ಪಿ.ಎಸ್.ಎಸ್) ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕೀಯರ ಕ್ಷೇಮಾಭಿವೃದ್ಧಿ ಸಮಿತಿಯಿಂದ ರಾಜ್ಯ ಸಂಸ್ಥಾಪಕ ಅಧ್ಯಕ್ಷ ಕಲ್ವಮಂಜಲಿ ಸಿ. ಶಿವಣ್ಣ ನೇತೃತ್ವದಲ್ಲಿ ಉಪನಿರ್ದೇಶಕರ ಕಛೇರಿಯಲ್ಲಿ ಎಂ.ಜಿ. ಪಾಲಿರವರನ್ನು ಶಾಲೂ ಹೊದಿಸಿ ಹಾರ ಹಾಕಿ ಸಿಹಿ ತಿನಿಸುವ ಮೂಲಕ ಸ್ವಾಗತಿಸಲಾಯಿತು.
    
ಇದೇ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಅಭಿವೃದ್ಧಿ ನಿರೀಕ್ಷಕಿ ಶೀಲಾ.ಬಿ.ಎಸ್. ಎಂಬುವರು ಇಲಾಖೆಗೆ ಬಂದಾಗಿನಿಂದ ಜಿಲ್ಲೆಯ ಬಡ ಮಹಿಳೆಯರಿಗೆ ಇಲಾಖೆಯಿಂದ ಹೆಚ್ಚಿನ ಸೌಲಭ್ಯಗಳನ್ನು ನೀಡಿ ಉತ್ತಮ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಾ ಈಗ ಮಾಲೂರಿನ ಪ್ರಭಾರ ಸಿ.ಡಿ.ಪಿ.ಒ. ಆಗಿ ಅಧಿಕಾರ ವಹಿಸಿಕೊಂಡಿರುವುದಕ್ಕೆ ಶೀಲಾ ರವರನ್ನು ಉಪನಿರ್ದೇಶಕಿಯ ಮುಖಾಂತರ ಶಾಲೂ ಹೊದಿಸಿ ಹಾರ ಹಾಕಿ ಸಿಹಿ ತಿನಿಸುವ ಮೂಲಕ ಅವರನ್ನು ಸಹ ಸಮಿತಿಯಿಂದ ಅಭಿನಂದಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಪ್ರೊ.ನಂಜುಂಡ ಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೋಲಾರದ ಜಿ. ನಾರಾಯಣಸ್ವಾಮಿ, ಅಂಗನವಾಡಿ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ನಿರ್ಮಲಾ ಬಾಯಿ, ಸಮಿತಿಯ ಮುಖಂಡರುಗಳಾದ ನಾಗವೇಣಮ್ಮ, ವಿ.ಜಮುನಾರಾಣಿ, ಶ್ರೀನಿವಾಸಪುರದ ಎಂ.ಪಾರ್ವತಮ್ಮ, ಚೌಡಮ್ಮ, ಮಾಲೂರಿನ ಎಂ.ವಿಜಯಕುಮಾರಿ ಹಾಗೂ ಅಂಗವಿಕಲ ಕಲ್ಯಾಣಾಧಿಕಾರಿ ವೆಂಕಟರಮಣಪ್ಪ ಮತ್ತು ಮಾಲೂರಿನ ಮಹಿಳಾ ಸಂತ್ವಾನ ಸಹಾಯವಾಣಿಯ ಕಾರ್ಯದರ್ಶಿ ಎಸ್.ಆರ್.ಲಕ್ಷ್ಮಮ್ಮ ಉಪಸ್ಥಿತರಿದ್ದರು.

                                

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...