ಪಶ್ಚಿಮ ಪದವೀಧರ ಕ್ಷೇತ್ರ : ಮಸ್ಟರಿಂಗ್ ಕಾರ್ಯ ಪರಿಶೀಲಿಸಿದ ಜಿಲ್ಲಾಧಿಕಾರಿ

Source: SO News | By Laxmi Tanaya | Published on 27th October 2020, 9:34 PM | State News | Don't Miss |

ಧಾರವಾಡ :  ಅಕ್ಟೋಬರ್‌ 28 ರಂದು ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ  ಮತದಾನ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಮಸ್ಟರಿಂಗ್ ಕಾರ್ಯ ಜರುಗಿತು.

ಧಾರವಾಡ ತಹಸೀಲ್ದಾರ ಕಚೇರಿ ಆವರಣದ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಅವರು ಮತಗಟ್ಟೆ ತೆರಳುವ ಅಧಿಕಾರಿ,ಸಿಬ್ಬಂದಿಗಳಿಗೆ ಹಸ್ತಾಂತರಿಸಲು ಸಿದ್ಧಪಡಿಸಿರುವ ಚುನಾವಣಾ ಸಾಮಗ್ರಿಗಳು, ಕೋವಿಡ್ ನಿಯಂತ್ರಣ ಮುಂಜಾಗ್ರತಾ ಕ್ರಮಕ್ಕಾಗಿ ನೀಡಲಾಗಿರುವ ಮಾಸ್ಕ್, ಹ್ಯಾಂಡ್ ಗ್ಲೋಸ್ ಮತ್ತಿತರ ಪರಿಕರಗಳನ್ನು ಪರಿಶೀಲಿಸಿದರು.

ಧಾರವಾಡ , ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಒಳಗೊಂಡಿರುವ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಧಾರವಾಡ ಜಿಲ್ಲೆಯಲ್ಲಿ - 21549 , ಗದಗ- 15978 ,ಹಾವೇರಿ -23593 ಹಾಗೂ ಉತ್ತರ ಕನ್ನಡ 13148 ಜನ ಮತದಾರರು ಸೇರಿ ಒಟ್ಟು ಕ್ಷೇತ್ರದಲ್ಲಿ 74268 ಮತದಾರರು ಇದ್ದಾರೆ. ಧಾರವಾಡ ಜಿಲ್ಲೆಯ 54 ಮತಗಟ್ಟೆಗಳಲ್ಲಿ ಅಕ್ಟೋಬರ್‌ 28 ರ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...