ಚುನಾವಣಾ ಬಾಂಡ್ ಗಳೆಂದರೇನು?

Source: Vb | By I.G. Bhatkali | Published on 17th February 2024, 4:23 PM | National News | Don't Miss |

ಚುನಾವಣಾ ಬಾಂಡ್‌ಗಳೆಂದರೆ ನಾಗರಿಕರು ಮತ್ತು ಕಾರ್ಪೊರೇಟ್ ಕಂಪೆನಿಗಳು ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಲು ಬಳಸಬಹುದಾದ ಬಾಂಡ್‌ಗಳು. ಇವುಗಳನ್ನು ನಾಗರಿಕರು ಮತ್ತು ಕಂಪೆನಿಗಳು ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ)ನ ಶಾಖೆಗಳಿಂದ ಖರೀದಿಸಿ ತಮಗೆ ಬೇಕಾದ ಪಕ್ಷಗಳಿಗೆ ನೀಡಬಹುದಾಗಿದೆ. ಹೀಗೆ ಸ್ವೀಕರಿಸುವ ಬಾಂಡ್‌ಗಳನ್ನು ರಾಜಕೀಯ ಪಕ್ಷಗಳು ಭಾರತೀಯ ಸ್ಟೇಟ್ ಬ್ಯಾಂಕ್ ಶಾಖೆಗಳಿಗೆ ನೀಡಿ ನಗದೀಕರಿಸಬಹುದಾಗಿದೆ.

ಈ ಯೋಜನೆಯನ್ನು ಕೇಂದ್ರದ ಭಾರತೀಯ ಜನತಾ ಪಕ್ಷ ಸರಕಾರವು 2018 ಜನವರಿಯಲ್ಲಿ ಪರಿಚಯಿಸಿತ್ತು.

ಚುನಾವಣಾ ಬಾಂಡ್‌ಗಳ ಖರೀದಿ ಮತ್ತು ನಗದೀಕರಣಗಳ ಇಡೀ ಪ್ರಕ್ರಿಯೆಯು ಅನಾಮಧೇಯವಾಗಿ ನಡೆಯುತ್ತದೆ. ಈ ಬಡ್ಡಿರಹಿತ ಬಾಂಡ್‌ಗಳನ್ನು ಖರೀದಿಸಿದ್ದೇವೆ ಎನ್ನುವುದನ್ನು ಖರೀದಿದಾರರು ಘೋಷಿಸಬೇಕಾಗಿಲ್ಲ ಮತ್ತು ರಾಜಕೀಯ ಪಕ್ಷಗಳು ತಮ್ಮ ಹಣದ ಮೂಲವನ್ನೂ ತೋರಿಸಬೇಕಾಗಿಲ್ಲ. ಚುನಾವಣಾ ಬಾಂಡ್‌ಗಳ ಮೂಲಕ ಸ್ವೀಕರಿಸಲಾಗಿರುವ ಒಟ್ಟು ಮೊತ್ತವನ್ನಷ್ಟೇ ಲೆಕ್ಕ ಪರಿಶೋಧನೆಗೆ ಒಳಗಾದ ಬ್ಯಾಂಕ್ ಹೇಳಿಕೆಗಳ ಮೂಲಕ ರಾಜಕೀಯ ಪಕ್ಷಗಳು ಚುನಾವಣಾ ಆಯೋಗಕ್ಕೆ ಬಹಿರಂಗಪಡಿಸಿದರೆ ಸಾಕಾಗುತ್ತದೆ.

ಆದರೆ, ಚುನಾವಣಾ ಬಾಂಡ್‌ಗಳ ದೇಣಿಗೆದಾರರ ವಿವರಗಳನ್ನು ಕೇಂದ್ರ ಸರಕಾರ ಪಡೆಯಬಹುದಾಗಿದೆ. ಯಾಕೆಂದರೆ, ಭಾರತೀಯ ಸ್ಟೇಟ್ ಬ್ಯಾಂಕ್ ಅದರ ಒಡೆತನಕ್ಕೆ ಒಳಪಟ್ಟಿದೆ.

Read These Next

ಡೆಹ್ರಾಡೂನ್: ಕ್ರೈಸ್ತ ಪ್ರಾರ್ಥನಾ ಸಭೆಯ ಮೇಲೆ ಸಂಘ ಪರಿವಾರದಿಂದ ದಾಳಿ; ಏಳು ಜನರಿಗೆ ಹಲ್ಲೆ

ಸಂಘ ಪರಿವಾರ ಕಾರ್ಯಕರ್ತರ ಗುಂಪೊಂದು ರವಿವಾರ ಇಲ್ಲಿ ಕ್ರೈಸ್ತ ಪ್ರಾರ್ಥನಾ ಸಭೆ ನಡೆಯುತ್ತಿದ್ದ ಮನೆಯ ಮೇಲೆ ದಾಳಿ ನಡೆಸಿದೆ. ಕನಿಷ್ಠ ...

ಲೋಕಸಭಾ ಚುನಾವಣೆಯ ಬಳಿಕ ಮುಸ್ಲಿಮರ ವಿರುದ್ಧ ಗುಂಪು ದಾಳಿ ಪ್ರಕರಣದಲ್ಲಿ ಹೆಚ್ಚಳ; ಜಮಾಅತೆ ಇಸ್ಲಾಮೀ ಹಿಂದ್ ಕಳವಳ

ಹೊಸದಿಲ್ಲಿ : ದೇಶದಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರದ ಪ್ರಕರಣಗಳು ಅಧಿಕಗೊಂಡಿದ್ದು, ಅದರಲ್ಲೂ ಲೋಕಸಭಾ ಚುನಾವಣೆಯ ಬಳಿಕ ...

ಬ್ರಿಟಿಷ್ ಯುಗದ ಕಾನೂನುಗಳಿಗೆ ತೆರೆ; ಇಂದಿನಿಂದ ಮೂರು ನೂತನ ಕ್ರಿಮಿನಲ್ ಕಾಯ್ದೆಗಳು ಜಾರಿ

ಸೋಮವಾರ, ಜುಲೈ 1ರಂದು ಮೂರು ನೂತನ ಕ್ರಿಮಿನಲ್ ಕಾನೂನುಗಳು ದೇಶಾದ್ಯಂತ ಜಾರಿಗೊಳ್ಳಲಿದ್ದು ಬ್ರಿಟಿಷ್ ಯುಗದ ಕಾನೂನುಗಳು ಅಸ್ತಿತ್ವ ...

ಮನೆಯಂಗಳದಲ್ಲಿ 7 ಅಡಿ ಉದ್ದದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ‌ ಕಾಡಿಗೆ ಬಿಟ್ಟ ಉರಗ ಪ್ರೇಮಿಗಳು 

ಭಟ್ಕಳ ಕರಾವಳಿ ಭಾಗದಲ್ಲಿ ಮಳೆಯು  ಅಬ್ಬರಿಸುತ್ತಿದೆ. ಮಳೆಯಿಂದಾಗಿ ಕಾಡಿನಿಂದ ಮನೆಗಳತ್ತ ಹಾವುಗಳು ಬರುತ್ತಿದ್ದು ತಾಲೂಕಿನ ...

ಗುಡ್ಡ ಕುಸಿತದಿಂದ ಮೃತಪಟ್ಟ ಕುಟುಂಬಕ್ಕೆ ಸರ್ಕಾರದಿಂದ ತಲಾ ೫ಲಕ್ಷ ರೂ ಪರಿಹಾರ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ

ಅಂಕೋಲಾ : ಇತ್ತಿಚೆಗೆ ಬಿದ್ದ ಭಾರಿ ಮಳೆಯಿಂದಾಗಿ ಉ.ಕ. ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ  ಗುಡ್ಡ ಕುಸಿದು ಮೃತ ಪಟ್ಟವರ ...