ಬಿಜೆಪಿ ಬಗ್ಗೆ ನಾನೇಕೆ ಪ್ರಚಾರ ಮಾಡಬೇಕು?; ಬಾಬಾ ರಾಮದೇವ ಪ್ರಶ್ನೆ

Source: sonews | By Staff Correspondent | Published on 16th September 2018, 10:43 PM | National News | Special Report | Don't Miss |

ಹೊಸದಿಲ್ಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಾನೇಕೆ ಬಿಜೆಪಿ ಪರ ಪ್ರಚಾರ ಮಾಡಬೇಕು ಎಂದು ಯೋಗ ಗುರು ಬಾಬಾ ರಾಮದೇವ್ ಪತ್ರಕರ್ತರನ್ನೇ ಪ್ರಶ್ನಿಸಿ ಹುಬ್ಬೇರುವಂತೆ ಮಾಡಿದ್ದಾರೆ.  ಬೆಲೆಏರಿಕೆಯನ್ನು ನಿಯಂತ್ರಿಸದಿದ್ದರೆ ಅದು ಈ ಸರಕಾರಕ್ಕೆ ದುಬಾರಿಯಾಗಿ ಪರಿಣಮಿಸಲಿದೆ ಎಂದು ಹೇಳುವ ಮೂಲಕ ಯೋಗಗುರು ರಾಮದೇವ್ ಅವರು ರವಿವಾರ ನರೇಂದ್ರ ಮೋದಿ ಸರಕಾರಕ್ಕೆ ಎಚ್ಚರಿಕೆಯ ಸಂದೇಶವೊಂದನ್ನು ರವಾನಿಸಿದ್ದಾರೆ.

ಅವರು ಎನ್‌ಡಿಟಿವಿ ಯುವ ಸಮ್ಮೇಳದ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು

ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ತಾನು ಬಿಜೆಪಿ ಪರ ಪ್ರಚಾರ ಕಾರ್ಯವನ್ನು ನಡೆಸುವುದಿಲ್ಲ ಎಂದೂ ಹೇಳಿದ ಅವರು,ಸರಕಾರವು ತನಗೆ ಅವಕಾಶ ನೀಡಿದರೆ ಮತ್ತು ತೆರಿಗೆಯನ್ನು ಸ್ವಲ್ಪ ತಗ್ಗಿಸಿದರೆ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಈಗಿ ಅರ್ಧದಷ್ಟು ಬೆಲೆಗಳಲ್ಲಿ ತಾನು ಮಾರಾಟ ಮಾಡಬಲ್ಲೆ ಎಂದೂ ತಿಳಿಸಿದರು.

ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ರಾಮದೇವ್ ಬಿಜೆಪಿಯನ್ನು ಬೆಂಬಲಿಸಿದ್ದರು. ಒಂದು ವರ್ಷದ ಬಳಿಕ ಅವರನ್ನು ಹರ್ಯಾಣದ ಬ್ರಾಂಡ್ ರಾಯಭಾರಿಯನ್ನಾಗಿ ಮಾಡಿ ಸಂಪುಟ ಸಚಿವರ ಸ್ಥಾನಮಾನವನ್ನು ನೀಡಲಾಗಿತ್ತು.

ಎನ್‌ಡಿಟಿವಿ ಯುವ ಸಮ್ಮೇಳದ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ರಾಮದೇವ್,ನೀವು ಈ ಬಾರಿಯೂ ಬಿಜೆಪಿ ಪರ ಪ್ರಚಾರ ಮಾಡುತ್ತೀರಾ ಎಂಬ ಪ್ರಶ್ನೆಗೆ,ತಾನೇಕೆ ಅದನ್ನು ಮಾಡಬೇಕು ಎಂದು ಮರುಪ್ರಶ್ನಿಸಿದರು.

ತಾನು ಇತ್ತೀಚಿಗೆ ರಾಜಕೀಯದಿಂದ ದೂರವಾಗಿದ್ದೇನೆ ಎಂದು ಅವರು ಒಪ್ಪಿಕೊಂಡರು.

ಪ್ರಧಾನಿ ಮೋದಿಯವರನ್ನು ಟೀಕಿಸುವುದು ಜನರ ಮೂಲಭೂತ ಹಕ್ಕು ಆಗಿದೆ ಎಂದ ಅವರು ಅದಕ್ಕೆ ಕಾರಣಗಳನ್ನು ನೀಡಲಿಲ್ಲ. ಆದರೆ ಮೋದಿಯವರು ಒಳ್ಳೆಯ ಕೆಲಸವನ್ನು ಮಾಡಿದ್ದಾರೆ. ಸ್ವಚ್ಛ ಭಾರತ ಅಭಿಯಾನವನ್ನು ಆರಂಭಿಸಿದ್ದಾರೆ. ಯಾವುದೇ ದೊಡ್ಡ ಹಗರಣಗಳಿಗೆ ಅವಕಾಶ ನೀಡಿಲ್ಲ ಎಂದರು. ಸರಕಾರವು ಇಂಧನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬೇಕು. ಆದರೆ ಗರಿಷ್ಠ ಶೇ.28ರ ತೆರಿಗೆಯನ್ನು ವಿಧಿಸಕೂಡದು. ಆದಾಯ ನಷ್ಟವು ದೇಶವನ್ನು ಮುನ್ನಡೆಯುವುದನ್ನು ತಡೆಯುವುದಿಲ್ಲ. ನಾವು ಶ್ರೀಮಂತರಿಗೆ ತೆರಿಗೆಯನ್ನು ವಿಧಿಸಬಹುದು ಎಂದರು.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...