ರೈಲು ಹಳಿ ಮೇಲೆ ಯುವತಿ ಶವ ಪತ್ತೆ; ಆತ್ಮಹತ್ಯೆ ಶಂಕೆ

Source: sonews | By Staff Correspondent | Published on 27th June 2018, 5:52 PM | Coastal News | Don't Miss |

ಭಟ್ಕಳ: ತಾಲೂಕಿನ ಶಿರಾಲಿ ಪಂಚಾಯತ್ ವ್ಯಾಪ್ತಿಯ ಚಿತ್ರಾಪುರ ರೈಲು ಹಳಿಯ ಮೇಲೆ ಯುವತಿಯೊಬ್ಬರ ಶವವೊಂದು ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. 

ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಚಿತ್ರಾಪುರ ನಿವಾಸಿ ಶೋಭಾ ಮಹದೇವ ನಾಯ್ಕ(24) ಎಂದು ಗುರುತಿಸಲಾಗಿದೆ. 

ಮಂಗಳವಾರ ರಾತ್ರಿ 8ಗಂಟೆ ಸುಮಾರು ಮನೆಯಿಂದ ಕಾಣೆಯಾಗಿರುವ ಈಕೆ ಮನೆಯವರು ಸಂಬಂಧಿಕರಲ್ಲಿ ಹಾಗೂ ಆಕೆಯ ಸ್ನೇಹಿತೆಯರಲ್ಲಿ ವಿಚಾರಿಸಿದ್ದು ಅವರಾರ ಬಳಿಯು ಯುವತಿಯ ಕುರಿತು ಮಾಹಿತಿ ಲಭ್ಯವಾಗಲಿಲ್ಲ ಎನ್ನಲಾಗಿದೆ. 

ತನ್ನ ಮನೆಯ ಬಳಿಯಿಂದ ಹಾದು ಹೋಗುವ ಕೊಂಕಣ ರೈಲು ಹಳಿಯಲ್ಲಿ  ಯುವತಿಯು  ರಾತ್ರಿ 1 ಗಂಟೆ ಸುಮಾರು ದೇಹಲಿಯಿಂದ ಕೇರಳಕ್ಕೆ ಹೋಗುವ ಮಂಗಳ ಎಕ್ಸ್‍ಪ್ರೆಸ್ ರೈಲಿನಡಿ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ನಂತರ ತಿಳಿದುಬಂದಿದೆ. 

ಮೃತ ಯುವತಿ ಕೋಟೆಬಾಗಿಲ ಖಾಸಗಿ ಪ್ರೌಢಶಾಲೆಯೊಂದರಲ್ಲಿ ಕಂಪ್ಯೂಟರ್ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿದ್ದು  ಇತ್ತಿಚೆಗಷ್ಟೆ ಇವರ ತಾಯಿ ನಿಧನರಾಗಿದ್ದು ತಂದೆ ಹಾಗೂ ಸಹೋದರನೊಂದಿಗೆ ಮನೆಯಲ್ಲಿ ವಾಸಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ. 

Read These Next

ಅಕ್ರಮ ಗಣಿಗಾರಿಕೆ; ಬಂಧಿತ ರೌಡಿಶೀಟ‌ರ್ ಬಿಡುಗಡೆ ಮಾಡಲು ಪೊಲೀಸರಿಗೆ ಬೆದರಿಕೆ; ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

ಅಕ್ರಮ ಕಲ್ಲಿನಕೋರೆ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ ವೇಳೆ ಠಾಣೆಗೆ ಬಂದು ಪೊಲೀಸರಿಗೆ ಬೆದರಿಕೆ ಹಾಕಿ ...

ಕುಂದಾಪುರ: ತಾಯಿಯ ಕೊಳೆತ ಮೃತದೇಹದೊಂದಿಗೆ 3 ದಿನ ಕಳೆದ ವಿಕಲಚೇತನ ಮಗಳು – ಆಸ್ಪತ್ರೆಯಲ್ಲಿ ನಿಧನ

ಮನೆಯಲ್ಲೇ ಮೃತಪಟ್ಟು ಕೊಳೆತ ಸ್ಥಿತಿಯಲ್ಲಿದ್ದ ತಾಯಿಯ ಮೃತದೇಹದ ಜೊತೆ ಅನ್ನಾಹಾರ ಇಲ್ಲದೇ ಮೂರು ನಾಲ್ಕು ದಿನ ಕಳೆದ 32ರ ಹರೆಯದ ...

ರಸ್ತೆಯಲ್ಲಿ ಕಸ ಎಸೆಯುವುದನ್ನು ತಪ್ಪಿಸಲು ಹೆಬಳೆ ಪಂಚಾಯತ್ ವ್ಯಾಪ್ತಿಯಲ್ಲಿ ಸಿಸಿಟಿವಿ ಕ್ಯಾಮರಾ ಕಣ್ಗಾವಲು

ಸ್ಥಳೀಯ ಜನರ ಸಹಕಾರದಿಂದ ಹನೀಫಾಬಾದ್ ರಸ್ತೆಯಲ್ಲಿ ಮೂರು, ಜಾಮಿಯಾಬಾದ್ ರಸ್ತೆಯಲ್ಲಿ ಮೂರು, ಮಿನಾ ರಸ್ತೆಯಲ್ಲಿ ಒಂದು ಕ್ಯಾಮೆರಾ ...

ರಾಷ್ಟಿಯ ಹೆದ್ದಾರಿ ಕಾಮಗಾರಿಗಳನ್ನು ನಿಗದಿತ ಯೋಜನೆಯಂತೆ ಪೂರ್ಣಗೊಳಿಸಿ - ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಜಿಲ್ಲೆಯಲ್ಲಿ ಹಾದು ಹೋಗಿರುವ ಚತುಷ್ಪತ ರಾಷ್ಟಿಯ ಹೆದ್ದಾರಿಯ ಕಾಮಗಾರಿಯಲ್ಲಿ , ಉದ್ದೇಶಿತ ಯೋಜನೆಯಲ್ಲಿ ತಿಳಿಸಿರುವ ಎಲ್ಲಾ ...