ಬೆಳ್ತಂಗಡಿ: ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಪತ್ತೆ

Source: VB | By S O News | Published on 4th March 2021, 2:38 PM | Coastal News |

ಬೆಳ್ತಂಗಡಿ: ಕಳೆದ ಒಂದು ವಾರದಿಂದ ನಾಪತ್ತೆ ಯಾಗಿದ್ದ ಯುವತಿಯ ಮೃತದೇಹವು ಮನೆ ಸಮೀಪದ ಅರಣ್ಯದಲ್ಲಿ ಬುಧವಾರ ಪತ್ತೆಯಾಗಿದೆ.

ನೆರಿಯ ಗ್ರಾಮದ ಕೋಲೋಡಿ ನಿವಾಸಿ, ಮಂಜುನಾಥ ಸುಶೀಲಾ ಕೆ. ದಂಪತಿಯ ಪುತ್ರಿ ತೇಜಸ್ವಿನಿ(23)ಮೃತಪಟ್ಟವರು. ಯುವತಿ ಫೆ.22ರಂದು ಉಜಿರೆಗೆ ಕಂಪ್ಯೂಟರ್ ತರಗತಿಗೆ ತೆರಳಿದವರು ಮನೆಗೆ ವಾಪಸಾಗದೆ ನಾಪತ್ತೆಯಾಗಿದ್ದರು. ಇಂದು ಸ್ಥಳೀಯರು ಬಿದಿರು ಕಡಿಯುವ ಉದ್ದೇಶದಿಂದ ಕೋಲೋಡಿ ಕಾಡಿಗೆ ಹೋಗಿರುವ ಸಂದರ್ಭದಲ್ಲಿ ಯುವತಿಯ ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದರು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...