ರಕ್ತದಾನ ಅರಿವು ಮೂಡಿಸುವ ಜೆಸಿಐ ಬೈಕ್ ರ್ಯಾಲಿ

Source: so news | By MV Bhatkal | Published on 14th June 2018, 5:15 PM | Coastal News | Don't Miss |

ಭಟ್ಕಳ:ವಿಶ್ವ ರಕ್ತದಾನ ದಿನವಾದ ಇಂದು ಜೆಸಿಐ ಇಂಟರನ್ಯಾಷನಲ್ ವತಿಯಿಂದ ಭಟ್ಕಳದಿಂದ ಮಂಗಳೂರಿನ ತನಕ ಬೈಕ್ ರ್ಯಾಲಿ ಮಾಡುವ ಮುಖಾಂತರ ಜನರಿಗೆ ರಕ್ತದಾನದ ಮಹತ್ವದ ಬಗ್ಗೆ ಅರಿವು ಮೂಡಿಸುವ ಕಾರ್ಯ ಮಾಡಲಾಯಿತು.
ಈ ಸಂದರ್ಭದಲ್ಲಿ ಜೆಸಿಐ ವಲಯ 15ರ ಅಧ್ಯಕ್ಷರಾದ ರಾಕೇಶ ಕುಂಜೂರು ಮಾತನಾಡಿ ರಕ್ತದಾನದ ಅರಿವಿನ ಕೊರತೆಯಿಂದಾಗಿ ಇಂದು ಸಮಾಜದಲ್ಲಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಯಾರು ಮುಂದಾಗುತ್ತಿಲ್ಲ. ಬೇಡಿಕೆಗೆ ಅನುಸಾರ ಶೇಕಡಾ 30 ರಷ್ಟು ಮಾತ್ರ ರಕ್ತವು ಲಭ್ಯವಾಗುತ್ತಿದ್ದು, ತುರ್ತು ಸಂದರ್ಭದಲ್ಲಿ ರಕ್ತಕ್ಕಾಗಿ ಪರಿದಾಡಬೇಕಾದ ಪರಿಸ್ಥಿತಿ ನಮ್ಮಲ್ಲಿದೆ ಎಂದು ತಿಳಿಸಿದರು. ಹಾಗಾಗಿ ರಕ್ತದ ಕೊರತೆಯನ್ನು ನಿಗಿಸುವ ನಿಟ್ಟನಲ್ಲಿ ರಕ್ತದಾನ ಮಹತ್ವದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಜೆಸಿಐ ವತಿಯಿಂದ ಹಮ್ಮಿಕೊಂಡಿದ್ದು, ಭಟ್ಕಳದಿಂದ ಪ್ರಾರಂಭವಾಗುವ ಈ ರ್ಯಾಲಿ ಮಂಗಳೂರು ತಲಪುವ ತನಕ ಮಾರ್ಗ ಮಧ್ಯೆ ಅಲ್ಲಿಲ್ಲಿ ನಿಂತು ಜನರಿಗೆ ರಕ್ತದಾನದ ಪ್ರಾಮುಖ್ಯತೆ ಬಗ್ಗೆ ಅರಿವು ಮೂಡಿಸುವ ಕಾರ್ಯ ಮಾಡಲಿದೆ ಎಂದು ತಿಳಿಸಿದರು.
ಭಟ್ಕಳ ಜೆಸಿಐ ಭಟ್ಕಳ ಘಟಕದ ಅಧ್ಯಕ್ಷ ಕೆ ಜಬ್ಬರ ಸಾಹೇಬ್ ಪ್ರಾಸ್ತಾವಿಕ ಮಾತನಾಡಿದರೆ ಜೆಸಿಐ ಭಟ್ಕಳ ಘಟಕದ ಕಾರ್ಯದರ್ಶಿ ರಮೇಶ ಖಾರ್ವಿ ಸ್ವಾಗತಿಸಿ ವಂದಿಸಿದರು. ಜೆಸಿಐ ವಲಯ ಉಪಾಧ್ಯಕ್ಷ ರಾಘವೇಂದ್ರ, ಸುನೀಲ್ ಬಂಗೇರ, ಶ್ರೀನಿವಾಸ ಐತಾಳ, ರೋಟರಿ ಕ್ಲಬ್ ಸದಸ್ಯರಾದ ಎಸ್ ಎಂ ಖಾನ್, ನಜೀರ್ ಖಾಸೀಂಜೀ, ಜಿಸಿಐ ಭಟ್ಕಳ ಘಟಕ ಸದಸ್ಯರಾದ ಸುರೇಶಪೂಜಾರಿ, ಮಸೂದ್ ಬರ್ಮಾವರ್, ದಿನೇಶ ಶೇಟ್, ಮೋಹನ ನಾಯ್ಕ, ಶಂಕರ ನಾಯ್ಕ, ಪ್ರಸನ್ನ ಅಡಿಗ, ಈಶ್ವರ ನಾಯ್ಕ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...