ಆಸ್ಪತ್ರೆಗಳಿಗೆ ಧಾವಂತ, ಬೃಹತ್ ಸಮಾವೇಶಗಳಿಂದ ಭಾರತದ ಕೋವಿಡ್ ಸ್ಥಿತಿ ಇನ್ನಷ್ಟು ಉಲ್ಬಣ, ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

Source: VB | By S O News | Published on 28th April 2021, 4:26 PM | National News | Special Report |

ಜಿನಿವಾ: ಭಾರತದಲ್ಲಿ ಜನರು ಅನಗತ್ಯವಾಗಿ ಆಸ್ಪತ್ರೆಗಳಿಗೆ ಧಾವಿಸುವ ಮೂಲಕ ಬೃಹತ್ ಸಮಾವೇಶಗಳು, ಹೆಚ್ಚು ಸಾಂಕ್ರಾಮಿಕವಾಗಿರುವ ರೂಪಾಂತರಿತ ತಳಿಗಳು ಮತ್ತು ಕಡಿಮೆ ಲಸಿಕೆ ನೀಡಿಕೆ ದರ ಇವುಗಳಿಂದಾಗಿ ಹೆಚ್ಚುತ್ತಿರುವ ಕೋವಿಡ್-19 ಬಿಕ್ಕಟ್ಟನ್ನು ಇನ್ನಷ್ಟು ಹದಗೆಡಿಸುತ್ತಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ)ಯು ಮಂಗಳವಾರ ಹೇಳಿದೆ.

ಭಾರತದಲ್ಲೀಗ ಕೊರೋನ ವೈರಸ್ ಸಾವುಗಳ ಸಂಖ್ಯೆ ಎರಡು ಲಕ್ಷದ ಸನಿಹ ತಲುಪಿದ್ದು,ಸಾಕಷ್ಟು ಆಮ್ಲಜನಕ ಪೂರೈಕೆ ಮತ್ತು ಹಾಸಿಗೆಗಳು ಇಲ್ಲದ ಆಸ್ಪತ್ರೆಗಳು ಕೋವಿಡ್-19 ರೋಗಿಗಳಿಗೆ ಪ್ರವೇಶವನ್ನು ನಿರಾಕರಿಸುತ್ತಿವೆ. ಡಬ್ಲ್ಯುಎಚ್‌ಒ 4,000 ಆಮ್ಲಜನಕ ಸಾಂದ್ರೀಕರಣ ಸಾಧನಗಳು ಸೇರಿದಂತೆ ಪ್ರಮುಖ ಉಪಕರಣಗಳು ಮತ್ತು ಪೂರೈಕೆಗಳನ್ನು ಭಾರತಕ್ಕೆ ಒದಗಿಸುತ್ತಿದೆ ಎಂದು ಅದರ ವಕ್ತಾರ ತಾರಿಕ್ ಜಸರೆವಿಕ್ ತಿಳಿಸಿದರು.

ಶೇ.15ಕ್ಕೂ ಕಡಿಮೆ ಕೋವಿಡ್-19 ರೋಗಿಗಳಿಗೆ ನಿಜಕ್ಕೂ ಆಸ್ಪತ್ರೆಗಳಿಗೆ ದಾಖಲಾಗುವ ಅಗತ್ಯವಿದೆ ಮತ್ತು ಇದಕ್ಕೂ ಕಡಿಮೆ ರೋಗಿಗಳಿಗೆ ಆಮ್ಲಜನಕ ಅಗತ್ಯವಾಗಿದೆ ಎಂದು ಹೇಳಿದ ಅವರು, ಕೊರೋನ ವೈರಸ್‌ಗೆ ಮನೆಯಲ್ಲಿಯೇ ಪರಿಣಾಮಕಾರಿ ಉಪಚಾರವನ್ನು ಪಡೆಯಬಹುದು, ಆದರೆ ಇದರ ಬಗ್ಗೆ ಸರಿಯಾಗಿ ಮಾಹಿತಿಯಿಲ್ಲದೆ ಹಲವಾರು ಜನರು ಆಸ್ಪತ್ರೆಗಳಿಗೆ ಧಾವಿಸುತ್ತಿರುವುದು ಸಮಸ್ಯೆಯನ್ನುಂಟು ಮಾಡಿದೆ ಎಂದರು.

ಸಮುದಾಯ ಮಟ್ಟದ ಕೇಂದ್ರ ಗಳು ರೋಗಿಗಳ ತಪಾಸಣೆ ನಡೆಸಬೇಕು ಮತ್ತು ಚಿಕಿತ್ಸೆಯ ಸರದಿ ಯನ್ನು ನಿರ್ಧರಿಸಬೇಕು,ಜೊತೆಗೆ ಮನೆಯಲ್ಲಿಯೇ ಸುರಕ್ಷಿತ ಉಪಚಾರ ಪಡೆಯುವ ಬಗ್ಗೆ ಮಾಹಿತಿಗಳನ್ನು ಒದಗಿಸಬೇಕು. ಇಂತಹ ಮಾಹಿತಿಗಳನ್ನು ಹಾಟ್‌ಲೈನ್ ಗಳು ಅಥವಾ ಡ್ಯಾಷ್‌ಬೋರ್ಡ್‌ಗಳ ಮೂಲಕವೂ ಲಭ್ಯವಾಗಿಸಬೇಕು ಎಂದು ಅವರು ಹೇಳಿದರು.

ಕೊರೋನ ಅಟ್ಟಹಾಸ ಮಧ್ಯೆಯೇ ಕುಂಭಮೇಳ, ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿದ ಭಕ್ತರು!

ಹರಿದ್ವಾರ: ಇಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಮಂಗಳವಾರ ಚಿತ್ರಾ ಪೂರ್ಣಿಮೆಯ ಅಂಗವಾಗಿ ಭಾರೀ ಸಂಖ್ಯೆಯಲ್ಲಿ ಜನರು ಗಂಗಾನದಿಯಲ್ಲಿ ಪವಿತ್ರ ಸ್ನಾನವನ್ನು ಮಾಡಿದರು. ಕೋವಿಡ್-19 ಶಿಷ್ಟಾಚಾರಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿದ್ದ ಜನರು ಮಾಸ್ಕ್ ಗಳನ್ನು ಧರಿಸಿರಲಿಲ್ಲ, ಸುರಕ್ಷಿತ ಅಂತರವನ್ನೂ ಕಾಯ್ದುಕೊಂಡಿರಲಿಲ್ಲ. ವಿವಿಧ ಅಖಾಡಾಗಳ ಸಾಧುಗಳು ಪಾಲ್ಗೊಂಡಿದ್ದ ಅಂತಿಮ 'ಶಾಹಿ ಸ್ನಾನ'ವೂ ಮಂಗಳವಾರವೇ ನಡೆಯಿತು. ಮಾ.11ರಂದು ಮಹಾ ಶಿವರಾತ್ರಿಯ ಸಂದರ್ಭದಲ್ಲಿ ಮೊದಲ ಶಾಹಿ ಸ್ನಾನ ನಡೆದಿದ್ದರೆ ಎ.12 ಮತ್ತು ಎ.14ರಂದು ಎರಡನೇ ಮತ್ತು ಮೂರನೇ ಶಾಹಿ ಸ್ಥಾನಗಳು ನಡೆದಿದ್ದವು.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...