ಆಸ್ಪತ್ರೆಗಳಿಗೆ ಧಾವಂತ, ಬೃಹತ್ ಸಮಾವೇಶಗಳಿಂದ ಭಾರತದ ಕೋವಿಡ್ ಸ್ಥಿತಿ ಇನ್ನಷ್ಟು ಉಲ್ಬಣ, ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

Source: VB | By S O News | Published on 28th April 2021, 4:26 PM | National News | Special Report |

ಜಿನಿವಾ: ಭಾರತದಲ್ಲಿ ಜನರು ಅನಗತ್ಯವಾಗಿ ಆಸ್ಪತ್ರೆಗಳಿಗೆ ಧಾವಿಸುವ ಮೂಲಕ ಬೃಹತ್ ಸಮಾವೇಶಗಳು, ಹೆಚ್ಚು ಸಾಂಕ್ರಾಮಿಕವಾಗಿರುವ ರೂಪಾಂತರಿತ ತಳಿಗಳು ಮತ್ತು ಕಡಿಮೆ ಲಸಿಕೆ ನೀಡಿಕೆ ದರ ಇವುಗಳಿಂದಾಗಿ ಹೆಚ್ಚುತ್ತಿರುವ ಕೋವಿಡ್-19 ಬಿಕ್ಕಟ್ಟನ್ನು ಇನ್ನಷ್ಟು ಹದಗೆಡಿಸುತ್ತಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ)ಯು ಮಂಗಳವಾರ ಹೇಳಿದೆ.

ಭಾರತದಲ್ಲೀಗ ಕೊರೋನ ವೈರಸ್ ಸಾವುಗಳ ಸಂಖ್ಯೆ ಎರಡು ಲಕ್ಷದ ಸನಿಹ ತಲುಪಿದ್ದು,ಸಾಕಷ್ಟು ಆಮ್ಲಜನಕ ಪೂರೈಕೆ ಮತ್ತು ಹಾಸಿಗೆಗಳು ಇಲ್ಲದ ಆಸ್ಪತ್ರೆಗಳು ಕೋವಿಡ್-19 ರೋಗಿಗಳಿಗೆ ಪ್ರವೇಶವನ್ನು ನಿರಾಕರಿಸುತ್ತಿವೆ. ಡಬ್ಲ್ಯುಎಚ್‌ಒ 4,000 ಆಮ್ಲಜನಕ ಸಾಂದ್ರೀಕರಣ ಸಾಧನಗಳು ಸೇರಿದಂತೆ ಪ್ರಮುಖ ಉಪಕರಣಗಳು ಮತ್ತು ಪೂರೈಕೆಗಳನ್ನು ಭಾರತಕ್ಕೆ ಒದಗಿಸುತ್ತಿದೆ ಎಂದು ಅದರ ವಕ್ತಾರ ತಾರಿಕ್ ಜಸರೆವಿಕ್ ತಿಳಿಸಿದರು.

ಶೇ.15ಕ್ಕೂ ಕಡಿಮೆ ಕೋವಿಡ್-19 ರೋಗಿಗಳಿಗೆ ನಿಜಕ್ಕೂ ಆಸ್ಪತ್ರೆಗಳಿಗೆ ದಾಖಲಾಗುವ ಅಗತ್ಯವಿದೆ ಮತ್ತು ಇದಕ್ಕೂ ಕಡಿಮೆ ರೋಗಿಗಳಿಗೆ ಆಮ್ಲಜನಕ ಅಗತ್ಯವಾಗಿದೆ ಎಂದು ಹೇಳಿದ ಅವರು, ಕೊರೋನ ವೈರಸ್‌ಗೆ ಮನೆಯಲ್ಲಿಯೇ ಪರಿಣಾಮಕಾರಿ ಉಪಚಾರವನ್ನು ಪಡೆಯಬಹುದು, ಆದರೆ ಇದರ ಬಗ್ಗೆ ಸರಿಯಾಗಿ ಮಾಹಿತಿಯಿಲ್ಲದೆ ಹಲವಾರು ಜನರು ಆಸ್ಪತ್ರೆಗಳಿಗೆ ಧಾವಿಸುತ್ತಿರುವುದು ಸಮಸ್ಯೆಯನ್ನುಂಟು ಮಾಡಿದೆ ಎಂದರು.

ಸಮುದಾಯ ಮಟ್ಟದ ಕೇಂದ್ರ ಗಳು ರೋಗಿಗಳ ತಪಾಸಣೆ ನಡೆಸಬೇಕು ಮತ್ತು ಚಿಕಿತ್ಸೆಯ ಸರದಿ ಯನ್ನು ನಿರ್ಧರಿಸಬೇಕು,ಜೊತೆಗೆ ಮನೆಯಲ್ಲಿಯೇ ಸುರಕ್ಷಿತ ಉಪಚಾರ ಪಡೆಯುವ ಬಗ್ಗೆ ಮಾಹಿತಿಗಳನ್ನು ಒದಗಿಸಬೇಕು. ಇಂತಹ ಮಾಹಿತಿಗಳನ್ನು ಹಾಟ್‌ಲೈನ್ ಗಳು ಅಥವಾ ಡ್ಯಾಷ್‌ಬೋರ್ಡ್‌ಗಳ ಮೂಲಕವೂ ಲಭ್ಯವಾಗಿಸಬೇಕು ಎಂದು ಅವರು ಹೇಳಿದರು.

ಕೊರೋನ ಅಟ್ಟಹಾಸ ಮಧ್ಯೆಯೇ ಕುಂಭಮೇಳ, ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿದ ಭಕ್ತರು!

ಹರಿದ್ವಾರ: ಇಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಮಂಗಳವಾರ ಚಿತ್ರಾ ಪೂರ್ಣಿಮೆಯ ಅಂಗವಾಗಿ ಭಾರೀ ಸಂಖ್ಯೆಯಲ್ಲಿ ಜನರು ಗಂಗಾನದಿಯಲ್ಲಿ ಪವಿತ್ರ ಸ್ನಾನವನ್ನು ಮಾಡಿದರು. ಕೋವಿಡ್-19 ಶಿಷ್ಟಾಚಾರಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿದ್ದ ಜನರು ಮಾಸ್ಕ್ ಗಳನ್ನು ಧರಿಸಿರಲಿಲ್ಲ, ಸುರಕ್ಷಿತ ಅಂತರವನ್ನೂ ಕಾಯ್ದುಕೊಂಡಿರಲಿಲ್ಲ. ವಿವಿಧ ಅಖಾಡಾಗಳ ಸಾಧುಗಳು ಪಾಲ್ಗೊಂಡಿದ್ದ ಅಂತಿಮ 'ಶಾಹಿ ಸ್ನಾನ'ವೂ ಮಂಗಳವಾರವೇ ನಡೆಯಿತು. ಮಾ.11ರಂದು ಮಹಾ ಶಿವರಾತ್ರಿಯ ಸಂದರ್ಭದಲ್ಲಿ ಮೊದಲ ಶಾಹಿ ಸ್ನಾನ ನಡೆದಿದ್ದರೆ ಎ.12 ಮತ್ತು ಎ.14ರಂದು ಎರಡನೇ ಮತ್ತು ಮೂರನೇ ಶಾಹಿ ಸ್ಥಾನಗಳು ನಡೆದಿದ್ದವು.

Read These Next

ಮಣಿಪುರ ಬಿಕ್ಕಟ್ಟಿನ ಹೊಣೆಯನ್ನು ಮೋದಿ, ಅಮಿತ್ ಶಾ ವಹಿಸಬೇಕು; ಎನ್‌ಜಿಒ ಸಮೂಹ 'ವಿಕಲ್ಪ ಸಂಗಮ್' ಆಗ್ರಹ

200ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾದ ಮಣಿಪುರ ಬಿಕ್ಕಟ್ಟಿನ ನೈತಿಕ ಹೊಣೆಗಾರಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ...

ಗೋರಕ್ಷಣೆ ಹೆಸರಿನಲ್ಲಿ ಇಸ್ಕಾನ್ ಗೋವುಗಳನ್ನು ಕಸಾಯಿಖಾನೆಗೆ ಮಾರಾಟ ಮಾಡುತ್ತಿದೆ; ಮೇನಕಾ ಗಾಂಧಿ ಗಂಭೀರ ಆರೋಪ

ಗೋವುಗಳನ್ನು ಪಾಲನೆ ಮಾಡುವ ಹೆಸರಿನಲ್ಲಿ ಅವುಗಳನ್ನು ಕಸಾಯಿಖಾನೆಗೆ ಮಾರಾಟ ಮಾಡುವ ಇಸ್ಕಾನ್ (ಇಂಟರ್ ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ...

ದಲಿತ ಮಹಿಳೆಯ ವಿವಸ್ತಗೊಳಿಸಿ ಬಾಯಿಗೆ ಮೂತ್ರ ವಿಸರ್ಜನೆ; ಬಿಹಾರದಲ್ಲಿ ನಡೆದ ಅಮಾನವೀಯ ಕೃತ್ಯ

ಸಾಲ ಸಂಪೂರ್ಣ ಮರು ಪಾವತಿಸಿದ ಬಳಿಕ ಹೆಚ್ಚುವರಿ 1,500 ರೂ. ಪಾವತಿಸಲು ನಿರಾಕರಿಸಿದ ದಲಿತ ಮಹಿಳೆಯೊಬ್ಬರನ್ನು ಲೇವಾದೇವಿಗಾರ ಹಾಗೂ ಆತನ ...

ಕಡಲತಡಿಯಲ್ಲಿ ಕಣ್ಮನ ಸೆಳೆಯುತ್ತಿರುವ ಸೀ ವಾಕ್ ಶೃಂಗಾರ; ಭಟ್ಕಳದಲ್ಲಿ ಮಂತ್ರಿಗಳೇ, ಓಡುವುದು ಬೇಡ ನಡೆದಾಡಿ ಬನ್ನಿ

ಕರ್ನಾಟಕಕ್ಕೆ ಕರಾವಳಿ ತೀರ ಎನ್ನುವುದು ಶೃಂಗಾರ ಕಾವ್ಯದಂತಿದೆ. ಕಡಲ ತಡಿಯುದ್ಧಕ್ಕೂ ಸದಾ ಬಣ್ಣ ಬಣ್ಣದ ಕನಸುಗಳು ಚಿಗುರೊಡೆದು ...

ಭಟ್ಕಳ ವಿಧಾನಸಭಾ ಕ್ಷೇತ್ರ; ಜಾತಿ, ಪಕ್ಷಸಿದ್ಧಾಂತ ಬದಿಗಿಟ್ಟು “ಅಭ್ಯರ್ಥಿ” ಗಳ ಬಗ್ಗೆ ಆಸಕ್ತಿ ತೋರುತ್ತಿರುವ ಮತದಾರ

ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ೨೦೧೮ರ ಚುನಾವಣೆಗೆ ಹೋಲಿಸಿದರೆ ಈ ಬಾರಿ ಚುನಾವಣೆ ವಿಭಿನ್ನವಾಗಿ ಗೋಚರಿಸುತ್ತಿದೆ. ...

ಆನ್‌ಲೈನ್ ಹಣ ವಂಚನೆ, ಅಶ್ಲೀಲ ಜಾಲತಾಣಗಳ ವಿರುದ್ಧ 3 ವರ್ಷಗಳಲ್ಲಿ 32,746 ಪ್ರಕರಣ ದಾಖಲು

ಹಣ, ಅಶ್ಲೀಲ ಮತ್ತಿತರ ವಿಷಯಗಳ ಜಾಲತಾಣಗಳ ಕುರಿತಂತೆ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 32,746 ಪ್ರಕರಣಗಳು ದಾಖಲಾಗಿವೆ. ಅಲ್ಲದೇ ಇದೇ ...