ಯಲ್ಲಾಪುರ:40 ದಿನದ ಹಸುಗೂಸಿನ ಶವ ಬಾವಿಯಲ್ಲಿ ಪತ್ತೆ

Source: Prajavani | Published on 4th August 2020, 12:29 AM | Coastal News | Don't Miss |

 

ಯಲ್ಲಾಪುರ: ತಾಲ್ಲೂಕಿನ ರಾಮನಕೊಪ್ಪದಲ್ಲಿ ಶನಿವಾರ ರಾತ್ರಿ ಕಾಣೆಯಾಗಿದ್ದ 40 ದಿನದ ಹಸುಗೂಸೊಂದು, ಸೋಮವಾರ ಬೆಳಿಗ್ಗೆ ಮನೆಯ ಹತ್ತಿರದ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದೆ.
ರಾಮನಕೊಪ್ಪದ ರಾಮಲಿಂಗೇಶ್ವರ ದೇವಸ್ಥಾನದ ಬಳಿಯ ಚಂದ್ರಶೇಖರ ನಾಗೇಶ ಭಟ್ಟ ಮತ್ತು ಪ್ರಿಯಾಂಕಾ ದಂಪತಿ ಹೆಣ್ಣು ಮಗು ಇದಾಗಿದೆ. ಪ್ರಿಯಾಂಕಾ ಅವರ ಮೊದಲ ಹೆರಿಗೆ ಮಗು ಇದಾಗಿದ್ದು, ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಶನಿವಾರ ರಾತ್ರಿ 1.30ರ ಸುಮಾರಿಗೆ ಚಂದ್ರಶೇಖರ ಮಗುವನ್ನು ಕೈಯಾರೆ ಮಲಗಿಸಿದ್ದಾರೆ. ರಾತ್ರಿ 2.30ರ ಹೊತ್ತಿಗೆ ತಾಯಿ ಹಾಸಿಗೆಯಲ್ಲಿ ನೋಡಿದಾಗ, ಮಗು ಕಾಣದೇ ಇರುವುದು ಗಮನಕ್ಕೆ ಬಂದಿದೆ.
ಊರವರೆಲ್ಲ ಸೇರಿ ಮಗುವನ್ನು ಹುಡುಕಿದರೂ ಕಾಣದಿದ್ದಾಗ, ಅನಿವಾರ್ಯವಾಗಿ ಭಾನುವಾರ ಸಂಜೆ ಪೊಲೀಸರಿಗೆ ಮಾಹಿತಿ ನೀಡಿದರು ಎನ್ನಲಾಗಿದೆ. ಭಾನುವಾರ ರಾತ್ರಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಸೋಮವಾರ ಬೆಳಗಿನವರೆಗೂ ಮಗುವನ್ನು ಹುಡುಕಿದ್ದಾರೆ. ಅಲ್ಲದೆ, ದೇವರಲ್ಲಿ ಪ್ರಸಾದ, ಅಂಜನ, ಮಾಂತ್ರಿಕರನ್ನು ಕರೆಸಿ ಸಹ ಮಗುವನ್ನು ಹುಡುಕಿಸಲು ಪ್ರಯತ್ನ ನಡೆಸಲಾಗಿದೆ. ಸೋಮವಾರ ಬೆಳಕು ಹರಿದ ಮೇಲೆ, ನೀರು ತರಲು ಹೋದವರಿಗೆ ಮಗುವಿನ ಶವ ಬಾವಿಯಲ್ಲಿ ತೇಲುತ್ತಿರುವುದು ಕಂಡಿದೆ.
ಪಿಐ ಸುರೇಶ ಯಳ್ಳೂರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮನೆಯಲ್ಲಿ ಮಗುವಿನ ತಂದೆ, ತಾಯಿ, ಅಜ್ಜ, ಅಜ್ಜಿ, ದೊಡ್ಡಪ್ಪ ವಾಸವಾಗಿದ್ದಾರೆ. ಶನಿವಾರ ರಾತ್ರಿ ಮಗು ನಾಪತ್ತೆ ಆದ ಸಮಯದಲ್ಲಿ ಮನೆಯ ಹೊರ ಬಾಗಿಲಿನ ಚಿಲಕ ತೆಗೆದಿರುವುದು ಗಮನಕ್ಕೆ ಬಂದಿದೆ ಎಂದು ತಿಳಿದು ಬಂದಿದೆ

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...