ಬೆಂಗಳೂರು : ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿ ಪದತ್ಯಾಗ ಮಾಡಿದ್ದಾರೆ.
ಸೋಮವಾರ ಬೆಂಗಳೂರಿನ ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಅವರು ಮಾತನಾಡಿದ ಅವರು, ಎರಡು ವರ್ಷದ ಅವಧಿಯಲ್ಲಿ ನಾನು ಹಲವು ಅಗ್ನಿ ಪರೀಕ್ಷೆ ಎದುರಿಸಿದ್ದೇನೆ. ಆದರೂ ಶಕ್ತಿ ಮೀರಿ ಅಭಿವೃದ್ಧಿ ಕೆಲಸ ಮಾಡಿದ್ದೇನೆ ಎಂದರು.
ಈ ಹಿಂದೆ ಬಿಜೆಪಿ ಪಕ್ಷವನ್ನ ತಳಮಟ್ಟದಲ್ಲಿ ಸಂಘಟಿಸಿದ್ದರಿಂದ ಬಿಜೆಪಿ ಎತ್ತರಕ್ಕೆ ಬೆಳೆದು ನಿಂತಿದೆ. ರಾಜೀನಾಮೆಗೆ ಎರಡು ತಿಂಗಳ ಹಿಂದೆ ನಿರ್ಧರಿಸಿದ್ದೆ. ಆದರೀಗ ರಾಜೀನಾಮೆ ನೀಡುತ್ತಿದ್ದೇನೆಂದರು.
ಎಲ್ಲರ ಸಹಕಾರದಿಂದ ನಾಲ್ಕು ಬಾರಿ ಸಿಎಂ ಆಗಿ ಕೆಲಸ ಮಾಡಿದ್ದೇನೆಂದ ಯಡಿಯೂರಪ್ಪ ಅಭಿನಂದಿಸಿದರು. ಕಾರ್ಯಕ್ರಮದ ಬಳಿಕ ಅವರು ರಾಜ್ಯಪಾಲರನ್ನ ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ.