ಸಿಎಸ್ ಕೆ ಕ್ಯಾಂಪ್ ನಲ್ಲಿ ನೀವು ಮತ್ತೆ ನನ್ನನ್ನು ನೋಡಬಹುದು: ಸುರೇಶ್ ರೈನಾ

Source: PTI | Published on 2nd September 2020, 7:52 PM | Sports News | Don't Miss |

 

 
ನವದೆಹಲಿ: ಸುರೇಶ್ ರೈನಾ ಅವರು ಐಪಿಎಲ್‌ನಿಂದ ಅನಿರೀಕ್ಷಿತವಾಗಿ ಹೊರಬಂದ ಬಗ್ಗೆ ಮೌನ ಮುರಿದಿದ್ದು, ತಮ್ಮ ಕುಟುಂಬಕ್ಕಾಗಿ ಭಾರತಕ್ಕೆ ಮರಳಿರುವುದಾಗಿ ಹೇಳಿದ್ದಾರೆ. ಅಲ್ಲದೆ ಸೆಪ್ಟೆಂಬರ್ 19 ರಿಂದ ಪ್ರಾರಂಭವಾಗುವ ಐಪಿಎಲ್ ನಲ್ಲಿ ಆಡಲು ಮತ್ತೆ ಚೆನ್ನೈ ಸೂಪರ್ ಕಿಂಗ್ಸ್‌(ಸಿಎಸ್ ಕೆ)ಗೆ ಸೇರಲು ದುಬೈಗೆ ತೆರಳುವುದಾಗಿ ತಿಳಿಸಿದ್ದಾರೆ.
ಆಗಸ್ಟ್ 15 ರಂದು ಎಂ.ಎಸ್. ಧೋನಿ ಅವರೊಂದಿಗೆ ಅಂತರರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿದ ರೈನಾ ಅವರು ಐಪಿಎಲ್ ಗಾಗಿ ದುಬೈಗೆ ತೆರಳಿದ್ದರು. ಆದರೆ ಹಠಾತ್ ಆಗಿ ಭಾರತಕ್ಕೆ ವಾಪಸ್ ಆಗಿದ್ದರು. ಇದಕ್ಕೆ ಫ್ರ್ಯಾಂಚೈಸ್ ನಡುವಿನ ದೀರ್ಘಕಾಲದ ಬಿರುಕು ಕಾರಣ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಸುರೇಶ್ ರೈನಾ ಹಠಾತ್ ನಿರ್ಗಮನದ ಬಗ್ಗೆ ಸಾಕಷ್ಟು ಚರ್ಚೆಗೂ ನಾಂದಿಯಾಗಿತ್ತು.
ಈ ಬಗ್ಗೆ ಇಂದು ಸ್ಪಷ್ಟನೆ ನೀಡಿರುವ ರೈನಾ, ನೀವು ಮತ್ತೆ ನನ್ನನ್ನು ಸಿಎಸ್ ಕೆ ಕ್ಯಾಂಪ್ ನಲ್ಲಿ ನೋಡಬಹುದು ಎಂದಿದ್ದಾರೆ.
"ನಾನು ವಾಪಸ್ ಬಂದಿದ್ದು ವೈಯಕ್ತಿಕ ನಿರ್ಧಾರ ಮತ್ತು ನನ್ನ ಕುಟುಂಬಕ್ಕಾಗಿ ನಾನು ಹಿಂತಿರುಗಬೇಕಾಗಿತ್ತು. ಮನೆಯ ಮುಂಭಾಗದಲ್ಲಿ ತಕ್ಷಣವೇ ಗಮನಹರಿಸಬೇಕಾದ ಸಂಗತಿಯಿದೆ. ಸಿಎಸ್ ಕೆ ನನ್ನ ಕುಟುಂಬವೂ ಹೌದು ಮತ್ತು ಮಹಿ ಭಾಯ್ (ಎಂಎಸ್ ಧೋನಿ) ನನಗೆ ಬಹಳ ಮುಖ್ಯ ಮತ್ತು ಇದು ಕಠಿಣ ನಿರ್ಧಾರ" ಎಂದು ಸುರೇಶ್ ರೈನಾ 'ಕ್ರಿಕ್‌ ಬಜ್ ಗೆ ತಿಳಿಸಿದ್ದಾರೆ.
ಸಿಎಸ್ ಕೆ ಮತ್ತು ನನ್ನ ನಡುವೆ ಯಾವುದೇ ಸಮಸ್ಯೆ ಇಲ್ಲ. 12.5 ಕೋಟಿ ರೂ. ಪಡೆಯುವುದರಿಂದ ಯಾರೂ ಹಿಂದೆ ಸರಿಯುವುದಿಲ್ಲ ಮತ್ತು ಬಲವಾದ ಕಾರಣವಿಲ್ಲದೆ ಹೊರನಡೆಯುವುದಿಲ್ಲ. ನಾನು ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿರಬಹುದು ಆದರೆ ನಾನು ಇನ್ನೂ ಚಿಕ್ಕವನಾಗಿದ್ದೇನೆ ಮತ್ತು ಮುಂದಿನ 4-5 ವರ್ಷಗಳ ಕಾಲ ಐಪಿಎಲ್‌ನಲ್ಲಿ ಸಿಎಸ್ ಕೆ ಪರವಾಗಿ ಆಡಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ

Read These Next

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...