ಕಡವಿನಕಟ್ಟೆ ಡ್ಯಾಮಿನಲ್ಲಿ  ಈಜಲು ತೆರಳಿದ ಯುವಕ ನಾಪತ್ತೆ

Source: sonews | By Staff Correspondent | Published on 10th July 2019, 7:39 PM | Coastal News | Don't Miss |

ಭಟ್ಕಳ: ಕಳೆದ ಎರಡು ದಿನಗಳಿಂದ ಎಡೆಬಿಡದೆ ಬೀಳುತ್ತಿವ ಮಳೆಯಿಂದಾಗಿ ತಾಲೂಕಿನ ಕಡವಿನಕಟ್ಟೆ ಡ್ಯಾಂ ತುಂಬಿ ಹರಿಯುತ್ತಿದ್ದು ಈಜಲು ತೆರಳಿದ್ದ ಯುವಕನೊಬ್ಬ ನೀರಲ್ಲಿ ಮುಳುಗಿ ನಾಪತ್ತೆಯಾಗಿರುವ  ಘಟನೆ ಬುಧವಾರ ಸಂಜೆ ನಡೆದಿದೆ. 

ಡ್ಯಾಮಿನಲ್ಲಿ ಈಜುತ್ತ ಕಣ್ಮರೆಯಾಗಿರುವ ಯುವಕನನ್ನು ಪುರಸಭೆ ವ್ಯಾಪ್ತಿಯ ಫಾರೂಖಿ ಸ್ಟ್ರೀಟ್ 2ನೇ ಕ್ರಾಸ್ ನ  ನಿವಾಸಿ ಹಾಫಿಝ್ ಇಬ್ರಾಹೀಮ್ ಫೈಸಲ್ ಆಬಿದಾ(16) ಎಂದು ಗುರತಿಸಲಾಗಿದೆ. 

ವಿಷಯ ತಿಳಿಯುತ್ತಿದ್ದಂತೆ ನೂರಾರು ಮಂದಿ ಕಡವಿನಕಟ್ಟೆ ಡ್ಯಾಂ ಗೆ ತೆರಳಿದ್ದು ಸ್ಥಳಿಯರು ನಾಪತ್ತೆಯಾಗಿರುವ ಯುವಕನ ಹುಡುಕಾಟದಲ್ಲಿ ನಿರತರಾಗಿದ್ದಾರೆ. ಭಟ್ಕಳ ಪೊಲೀಸ್ ವೃತ್ತ ನಿರೀಕ್ಷಕ  ಸಿಪಿಐ ಗಣೇಶ ರವರು ಘಟನಾ ಸ್ಥಳದಲ್ಲೇ ಇದ್ದು ಪರಿಸ್ಥಿತಿಯನ್ನು ನಿಭಾಯಿಸುತ್ತಿದ್ದಾರೆ.

ಫೈಸಲ್ ಬುಧವಾರ ಬೆಳಿಗ್ಗೆ  ಮಕ್ಕಾದಿಂದ ಉಮ್ರಾ ಯಾತ್ರೆ ನಿರ್ವಹಿಸಿ ಭಟ್ಕಳಕ್ಕೆ ಬಂದಿದ್ದು ತನ್ನ ಸ್ನೇಹಿತರೊಂದಿಗೆ ಕಡವಿನಕಟ್ಟಾ ಡ್ಯಾಮ್ ಗೆ ಈಜಲು ತೆರಳಿದ್ದ ಎನ್ನಲಾಗಿದೆ. ಉತ್ತಮ ಈಜುಗಾರನಾಗಿದ್ದ ಫೈಸಲ್ ನೀರಿನಲ್ಲಿ ಬಹಳ ಹೊತ್ತು ಈಜಾಡಿದ್ದು ಆದರೆ ನೀರಿನ ರಭಸಕ್ಕೆ ದೂರ ದೂರಕ್ಕೆ ಹೋಗಿ ಕಣ್ಮರೆಯಾಗಿದ್ದಾನೆ ಎನ್ನಲಾಗಿದೆ. 

ಮನೆಯವರು ಎಷ್ಟೇ ನಿರಾಕರಿಸಿದರು ಹಠಕ್ಕೆ ಬಿದ್ದು ಮನೆಯವರ ಮಾತುಕೇಳದೆ ಈಜಲು ಹೋಗಿದ್ದೆ ಈ ದುರಂತಕ್ಕೆ ಕಾರಣವಾಗಿದೆ ಎನ್ನಲಾಗಿದ್ದು, ಭಟ್ಕಳದಲ್ಲೀಗ ಸೂತಕದ ಛಾಯೆ ಆವರಿಸಿಕೊಂಡಿದೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...