ಕಾರವಾರ: ವಿದ್ಯಾರ್ಥಿಗಳಲ್ಲಿನ ಪ್ರತಿಭೆಗೆ ಜಿಪಂ ಸಿಇಒ ಅವರಿಂದ ಪ್ರೇರೇಪಣೆ

Source: S O News | By I.G. Bhatkali | Published on 13th December 2023, 4:46 PM | Coastal News |

ಕಾರವಾರ: ವಿದ್ಯಾರ್ಥಿ, ವಿದ್ಯಾರ್ಥಿನಿಯರಲ್ಲಿ ಅಡಗಿರುವ ಪ್ರತಿಭೆಯನ್ನು ಪ್ರೇರೇಪಿಸುವ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಹತ್ತರವಾದ ಹೆಜ್ಜೆಯನ್ನಿಟ್ಟಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಅವರು, ಸ್ವತಃ ತಾವು ಭೇಟಿಕೊಟ್ಟ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪ್ರತಿಭೆಗೆ ಪೂರಕವಾಗುವಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲು ಪ್ರಾಚಾರ್ಯರಿಗೆ, ಶಿಕ್ಷಕರಿಗೆ ಮನವರಿಕೆ ಮಾಡಿಕೊಡುತ್ತ ಬರುತ್ತಿದ್ದು, ಇದರಿಂದ ಪ್ರೇರಣೆಗೊಂಡು ಕಾರವಾರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅನೀಮಿಯಾ ಮುಕ್ತ ಕರ್ನಾಟಕ ಶೀರ್ಷಿಕೆಯಡಿ ಜರುಗಿದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಶ್ರೇಣಿಯಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಇಂದು ಜಿಲ್ಲಾ ಪಂಚಾಯತ ಕಚೇರಿಗೆ ಆಹ್ವಾನಿಸಿ ಪ್ರಮಾಣ ಪತ್ರ ವಿತರಿಸಿ ಗೌರವಿಸಿದರು.

ತದನಂತರದಲ್ಲಿ ವಿಜೇತ ವಿದ್ಯಾರ್ಥಿಗಳೊಂದಿಗೆ ಮುಕ್ತವಾಗಿ ಸಂವಾದ ನಡೆಸಿದ ಸಿಇಒ ರವರು, ವಿದ್ಯಾರ್ಥಿಗಳ ಮುಂದಿನ ಗುರಿ, ಪ್ರಸ್ತುತ ವಿದ್ಯಾಭ್ಯಾಸದ ಪ್ರಗತಿ, ಶೈಕ್ಷಣಿಕ ಚಟುವಟಿಕೆಗಳ ವೃದ್ಧಿಗೆ ಪೂರಕವಾಗಿ ಕೈಗೊಳ್ಳಬಹುದಾದ ಅಂಶಗಳ ಕುರಿತು ಚರ್ಚಿಸಿದರು. ಜೊತೆಗೆ ತಮ್ಮ ವಿದ್ಯಾರ್ಥಿ ಜೀವನ, ಇಂಜಿನಿಯರಿAಗ್ ವ್ಯಾಸಂಗ, ಎಸ್‌ಎಸ್‌ಬಿ, ಏರ್ಪೋರ್ಸ್, ಐಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಯಶಸ್ಸಿಗೆ ರೂಪಿಸಿಕೊಂಡಿದ್ದ ಯೋಜನೆ, ನಿರಂತರ ಪ್ರಯತ್ನದ ಕುರಿತು ವಿದ್ಯಾರ್ಥಿಗಳೊಂದಿಗೆ ಮುಕ್ತವಾಗಿ ಹಂಚಿಕೊAಡರು. ಹಾಗೇ ವಿದ್ಯಾರ್ಥಿಗಳು ವ್ಯಕ್ತಪಡಿಸಿದ ಐಎಎಸ್, ಇಂಜಿನೀಯರ್, ಡಾಕ್ಟರ್ ಆಗಬೇಕೆಂಬ ಗುರಿಯ ಸಾಧನೆಗೆ ಪೂರಕವಾಗುವಂತೆ ಹಲವು ಸಲಹೆ, ಸೂಚನೆಗಳನ್ನು ನೀಡಿದರು.

ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕಾಲ ಕಾಲಕ್ಕೆ ಬರುವ ವಿಶೇಷ ದಿನಾಚರಣೆಗಳು, ಸ್ಥಳೀಯ ವಿಶೇಷತೆಗಳು, ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಕುರಿತು ಸಂವಾದ, ಸ್ಪರ್ಧೆ, ಚರ್ಚಾಕೂಟ, ಪ್ರಬಂಧ, ಚಿತ್ರಕಲೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವುದು ತುಂಬಾ ಅವಶ್ಯಕವಾಗಿದೆ. ಇದರಿಂದ ಮಕ್ಕಳಲ್ಲಿರುವ ಭೌದ್ಧಿಕ ಬೆಳವಣಿಗೆಗೆ ಪ್ರೇರೇಪಣೆ ಸಿಗುತ್ತದೆ. ಹೀಗಾಗಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಇಂಥಹ ಕಾರ್ಯಕ್ರಮಗಳ ಆಯೋಜನೆಗೆ ಹೆಚ್ಚಿನ ಆಧ್ಯತೆ ಸಿಗಬೇಕು. ಈ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.

ಕಾರವಾರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನವೆಂಬರ್ 27 ರಂದು ಜರುಗಿದ ಅನೀಮಿಯಾ ಮುಕ್ತ ಕರ್ನಾಟಕ ಪ್ರಬಂಧ ಸ್ಪರ್ಧೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳಾದ ಆರ್ಯನ್ ಜಿ. ನಾಯ್ಕ್ (ಪ್ರಥಮ), ಮೇಧನ ಎಂ. ಅಂಬಿಗ (ದ್ವಿತೀಯ), ಶ್ರೇಯಾ ಎಚ್. ಧುರಿ ಹಾಗೂ ಸಿದ್ದು ಬ. ಭಂಡಾರಿ (ತೃತೀಯ) ಸ್ಥಾನ ಪಡೆದು ವಿಜೇತರಾಗಿದ್ದಾರೆ.

ಈ ಸಂದರ್ಭದಲ್ಲಿ ಆರ್‌ಸಿಎಚ್ ಅಧಿಕಾರಿ ಡಾ.ನಟರಾಜ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಹರ್ಷಾ ವೆಂಕಟೇಶ್, ಕಾರವಾರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ರಮೇಶ ಎಸ್. ಪತ್ರೇಕರ, ಉಪನ್ಯಾಸಕ ಮಂಜುನಾಥ ಗುನಗಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Read These Next

ಕಾರವಾರ: ಹಣ, ಉಡುಗೊರೆ ಹಂಚಿಕೆ ಬಗ್ಗೆ ಹೆಚ್ಚಿನ ನಿಗಾ ವಹಿಸಿ : ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ್

ಮತದಾರರಿಗೆ ಹಣ, ಉಡುಗೊರೆ ಮತ್ತಿತರ ಆಮಿಷಗಳನ್ನು ಒಡ್ಡುವುದರ ಕುರಿತಂತೆ ತೀವ್ರ ನಿಗಾ ವಹಿಸಬೇಕು, ಈ ಕುರಿತಂತೆ ದೂರುಗಳು ಬಂದ ...

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...