ವಲಯಮಟ್ಟದ ಕ್ರೀಡಾಕೂಟ; ವಿದ್ಯಾಭಾರತಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಸಾಧನೆ

Source: sonews | By Staff Correspondent | Published on 17th September 2019, 6:42 PM | Coastal News |

ಭಟ್ಕಳ: ಇಲ್ಲಿನ ಆನಂದಾಶ್ರಮ ಶಾಲೆಯಲ್ಲಿ ಪ್ರೌಢ ಶಾಲೆಯಲ್ಲಿ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ನಡೆದ ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ವಿದ್ಯಾಭಾರತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು ವಿದ್ಯಾರ್ಥಿಗಳಾದ ಸಾಗರ ಮಡಿವಾಳ, ಅನನ್ಯ ಎಮ್. (ಯೋಗ), ಪವಿತ್ರ ಮಡಿವಾಳ, ಧೀರಜ್ ಖಾರ್ವಿ (ಲಾಂಗ್ ಜಂಪ್), ಮನೋಜ್ ಗೊಂಡ (ಚಕ್ರ ಎಸೆತ, ಗುಂಡು ಎಸೆತ),     ಆದಿತ್ಯ ಜಿ. (600 ಮಿ ಓಟ)ದಲ್ಲಿ  ತಾಲೂಕಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. 

ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಹಾಗೂ ಅವರಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರನ್ನು ಮುಖ್ಯೋಪಾಧ್ಯಾಯಿನಿ ರೂಪಾ ಖಾರ್ವಿ ಹಾಗೂ ಶಾಲೆಯ ಆಡಳಿತ ಮಂಡಳಿ ಅಭಿನಂದಿಸಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...